ಹೀಗೆ ೧ ವಾರದ ಮುಂಚೆ ಆಫೀಸಿಗೆ ಹೋಗೋವಾಗ, ಇನ್ಫೆಂಟ್ರಿ ರಸ್ತೆಯಲ್ಲಿ ಕಂಡಿತು. ಬೆಳಗಿನ ಸಮಯ, ಕಮ್ಮಿ ಟ್ರಾಫಿಕ್ಕು, ಜೊತೆಗೆ ಶಿವಾಜಿನಗರ ಜಂಕ್ಷನ್ ನಲ್ಲಿ ಕಾಯ್ತಾ ಇತ್ತು ಈ ಆಟೋ. ಲಬಕ್ ಅಂತ ಮೊಬೈಲ್ ಹೊರಗೆ ತೆಗೆದು, ಗಬಕ್ ಅಂತಾ ಫೋಟೋ ಹೊಡೆದೆ.

ಇದಕ್ಕೆ ಮುಂಚೆ ನೋಡಿದಾಗ ಬರಹ ಹೀಗೆ ಇತ್ತು -
ಅಭಿಮಾನಿಗಳೇ ದೇವರೆಂದರು ....ಡಾ ರಾಜಣ್ಣ
ಪ್ರಯಾಣಿಕರೇ ದೇವರೆಂದರು ..... ಮಿ ಕೆಂಪಣ್ಣ
ಆದ್ರೆ ಈಗ ಪಾಪ ಕೆಂಪಣ್ಣನವರ ಹೆಸರು, ಉಜ್ಜಿ ಉಜ್ಜಿ ಮಾಯವಾಗಿದೆ.
--------------------------------------------------------------------
ನಿಮ್ಮವನು,
ಕಟ್ಟೆ ಶಂಕ್ರ