ಈ ಆಟೋವನ್ನು ನಾನು ಜರ್ಮನಿಗೆ ಹೋಗೋಕ್ಕೆ ಮುಂಚೆ ವಿಲ್ಸನ್ ಗಾರ್ಡನ್ ಸ್ಮಶಾನದ ಮುಂದೆ ನೋಡಿದ್ದೆ. ಸಿಕ್ಕಾಪಟ್ಟೆ ಟ್ರಾಫಿಕ್ ಇತ್ತು ಅವತ್ತು. ಆದರೂ ಕಷ್ಟ ಪಟ್ಟು ಛೇಸ್ ಮಾಡಕ್ಕೆ ಪ್ರಯತ್ನಪಟ್ಟು ಸೋತು ಸುಮ್ಮನಾಗಿದ್ದೆ. ಮತ್ತೆ ಇದು ಎಲ್ಲಿ ಕಾಣುತ್ತೋ ಅಂತಾ ಕಾಯ್ತಾ ಇದ್ದೆ.
ಹೀಗೆ ೧ ವಾರದ ಮುಂಚೆ ಆಫೀಸಿಗೆ ಹೋಗೋವಾಗ, ಇನ್ಫೆಂಟ್ರಿ ರಸ್ತೆಯಲ್ಲಿ ಕಂಡಿತು. ಬೆಳಗಿನ ಸಮಯ, ಕಮ್ಮಿ ಟ್ರಾಫಿಕ್ಕು, ಜೊತೆಗೆ ಶಿವಾಜಿನಗರ ಜಂಕ್ಷನ್ ನಲ್ಲಿ ಕಾಯ್ತಾ ಇತ್ತು ಈ ಆಟೋ. ಲಬಕ್ ಅಂತ ಮೊಬೈಲ್ ಹೊರಗೆ ತೆಗೆದು, ಗಬಕ್ ಅಂತಾ ಫೋಟೋ ಹೊಡೆದೆ.
![](https://blogger.googleusercontent.com/img/b/R29vZ2xl/AVvXsEjF4RDixu-4Fv0Tanz5v976_RJ2deV2lkSI4P3HB6rrWVqGZUheKZYNsKMs3zWzbPpG-q0DuEIm3tyakCxv-tZURUSF1piItIL7gQwJHC4TSNbF7xpCZXUbd_G1ZlR28XLBc4MEqhy6Jb8n/s400/Abhimanigale+Devarendaru.jpg)
ಇದಕ್ಕೆ ಮುಂಚೆ ನೋಡಿದಾಗ ಬರಹ ಹೀಗೆ ಇತ್ತು -
ಅಭಿಮಾನಿಗಳೇ ದೇವರೆಂದರು ....ಡಾ ರಾಜಣ್ಣ
ಪ್ರಯಾಣಿಕರೇ ದೇವರೆಂದರು ..... ಮಿ ಕೆಂಪಣ್ಣ
ಆದ್ರೆ ಈಗ ಪಾಪ ಕೆಂಪಣ್ಣನವರ ಹೆಸರು, ಉಜ್ಜಿ ಉಜ್ಜಿ ಮಾಯವಾಗಿದೆ.
--------------------------------------------------------------------
ನಿಮ್ಮವನು,
ಕಟ್ಟೆ ಶಂಕ್ರ